ADVERTISEMENT

ಶೀಲ ಶಂಕಿಸಿ ಪತ್ನಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 17:08 IST
Last Updated 1 ಏಪ್ರಿಲ್ 2020, 17:08 IST

ಮಧುಗಿರಿ: ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಊಮನಹಳ್ಳಿ ಗ್ರಾಮದಲ್ಲಿ ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯ ಕೊಲೆ ಮಾಡಿದ್ದಾನೆ.

ಆರೋಪಿ ಬಸವರಾಜನನ್ನು ಪೊಲೀಸರು ಬಂಧಿಸಿದ್ದಾರೆ. ಸಾವಿತ್ರಮ್ಮ (36) ಕೊಲೆಯಾದ ಗೃಹಿಣಿ.

ಹಿರಿಯೂರು ತಾಲ್ಲೂಕಿನ ಮುದಿಯಪ್ಪನ ಕೊಟ್ಟಿಗೆ ಗ್ರಾಮದದವರಾದ ದಂಪತಿ ಹಾಗೂ ಮಗಳು ಊಮನಹಳ್ಳಿಯ ಆಂಜನೇಯ ಸ್ವಾಮಿ ದೇವಾಲಯಕ್ಕೆ ಬಂದಿದ್ದರು. ಮಾರ್ಚ್‌ 24ರಂದು ಲಾಕ್‌ಡೌನ್ ಆಗಿದ್ದರಿಂದ ವಾಹನಗಳು ಇಲ್ಲದ ಕಾರಣ ದೇವಾಲಯದಲ್ಲಿಯೇ ತಂಗಿದ್ದರು.

ADVERTISEMENT

ಆಗ ಬಸವರಾಜ ತನ್ನ ಪತ್ನಿಯ ಶೀಲ ಶಂಕಿಸಿ ದೇವಸ್ಥಾನದ ಸಮೀಪ ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಪತ್ನಿ ಶೀಲದ ವಿಚಾರವಾಗಿ ಆಗಾಗ್ಗೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಬಡವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.