ADVERTISEMENT

ಮಧುಗಿರಿ: ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2022, 7:23 IST
Last Updated 6 ಆಗಸ್ಟ್ 2022, 7:23 IST
   

ಮಧುಗಿರಿ: ತಾಲ್ಲೂಕಿನ ನಾಗಲಾಪುರ ಗ್ರಾಮದ ಸಮೀಪದಲ್ಲಿ ಹಳ್ಳ ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತ ದೇಹ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.

ತಾಲ್ಲೂಕಿನ ಹನುಮಂತಪುರ ಗ್ರಾಮದ ನಿವಾಸಿ ದ್ವಾರಪ್ಪ (60) ಬುಧವಾರ ರಾತ್ರಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಮೂರು ದಿನಗಳ ನಂತರ ಶವ ಪತ್ತೆಯಾಗಿದೆ.

ಶನಿವಾರ ನಾಗಲಾಪುರ ಗ್ರಾಮದ ಹಳ್ಳದಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿ ದ್ವಾರಪ್ಪ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ಮೃತ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ತಹಶೀಲ್ದಾರ್ ಸುರೇಶ್ ಆಚಾರ್ ತಿಳಿಸಿದರು.

ADVERTISEMENT
ಮಧುಗುರಿ ತಾಲ್ಲೂಕಿನ ನಾಗಲಾಪುರ ಗ್ರಾಮದ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತ ದೇಹವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರ ತೆಗೆದರು‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.