
ಪ್ರಜಾವಾಣಿ ವಾರ್ತೆಅಪಘಾತ
–ಪ್ರಾತಿನಿಧಿಕ ಚಿತ್ರ
ಮಧುಗಿರಿ: ತಾಲ್ಲೂಕಿನ ಜಡೆಗೊಂಡನಹಳ್ಳಿ ಗ್ರಾಮದ ಬಳಿ ಸೋಮವಾರ ರಸ್ತೆಯ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ದಂಪತಿ ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಗುಂಡಂಪಲ್ಲಿ ಗ್ರಾಮದ ಕೃಷ್ಣಾರೆಡ್ಡಿ (45), ಪತ್ನಿ ಜ್ಯೋತಿ (42) ಮೃತರು. ಕಾರಿನಲ್ಲಿದ್ದ ಮೃತರ ಸಂಬಂಧಿಕರಾದ ಚಿದಂಬರರೆಡ್ಡಿ (54), ಮಧುಸೂದನ್ ರೆಡ್ಡಿ (17) ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.