ADVERTISEMENT

ಇಲಾಖೆಗಳ ವಿಲೀನಕ್ಕೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 16:27 IST
Last Updated 5 ಜೂನ್ 2020, 16:27 IST
ಜೆ.ಸಿ.ಮಾಧುಸ್ವಾಮಿ
ಜೆ.ಸಿ.ಮಾಧುಸ್ವಾಮಿ   

ಪಾವಗಡ: ಕೆಲವು ಇಲಾಖೆಗಳಲ್ಲಿ ನೌಕರರು ಇದ್ದಾರೆ. ಆದರೆ ಅವರಿಗೆ ಕೆಲಸವೇ ಇಲ್ಲ. ಕೆಲವು ಇಲಾಖೆಗಳಲ್ಲಿ ನೌಕರರ ಸಂಖ್ಯೆ ಕಡಿಮೆ ಇದೆ. ಆದರೆ ಹೆಚ್ಚು ಕೆಲಸ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಇಲಾಖೆಗಳನ್ನು ಮತ್ತೊಂದು ಇಲಾಖೆಯ ಜತೆ ವಿಲೀನಗೊಳಿಸಲು ಚಿಂತಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನೌಕರರ ವೇತನ, ಭತ್ಯೆ ಹಾಗೂ ಆಡಳಿತ ನಿರ್ವಹಣೆಗೆ ರಾಜ್ಯ ಸರ್ಕಾರ ವಾರ್ಷಿಕ ₹ 85 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಇಲಾಖೆಗಳ ವಿಲೀನದಿಂದ ನೌಕರರಿಗೆ ಯಾವುದೇ ತೊಂದರೆ ಆಗುವುದಿಲ್ಲ’ ಎಂದರು.

ತಾಲ್ಲೂಕು ಮಟ್ಟದಲ್ಲಿರುವ ಕೆಲವು ಇಲಾಖೆಗಳನ್ನು ಜಿಲ್ಲಾ, ರಾಜ್ಯ ಮಟ್ಟದಲ್ಲಿ ಮಾತ್ರಕ್ಕೆ ಸೀಮಿತಗೊಳಿಸುವುದು. ಸಣ್ಣ ಪುಟ್ಟದಾದ ಎರಡು–ಮೂರು ಇಲಾಖೆಗಳನ್ನು ವಿಲೀನಗೊಳಿಸಿ ಒಬ್ಬ ಅಧಿಕಾರಿಯನ್ನೇ ನೇಮಕ ಮಾಡುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.