ಶಿರಾ: ತಾಲ್ಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹಾಟ್ಸ್ಪಾಟ್ ಎಂದು ಘೋಷಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಗ್ರಾಮಸ್ಥರು ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಲು ಹಿಂದೇಟು ಹಾಕಿದಾಗ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಗ್ರಾಮಕ್ಕೆ ತೆರಳಿ ಸೋಂಕಿತರ ಮನವೊಲಿಸಿದರು. ಸೋಂಕು ದೃಢಪಟ್ಟಿದ್ದ 8 ಮಂದಿಯನ್ನು ಶನಿವಾರ ಸಂಜೆ ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಿದರು. ಉಳಿದವರು ಗ್ರಾಮದಲ್ಲಿಯೇ ಇದ್ದಾರೆ. ಈಗಾಗಲೇ 4 ಮಂದಿ ಗುಣವಾಗಿದ್ದಾರೆ.
ಆಶಾ ಕಾರ್ಯಕರ್ತೆಯರು ಸೋಂಕಿತರ ಆರೋಗ್ಯ ಪರೀಕ್ಷಿಸುತ್ತಿದ್ದು, ಮಾತ್ರೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.