ADVERTISEMENT

ತುಮಕೂರು: ಮೀನು ಹಿಡಿಯಲು ಹೋಗಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 5:08 IST
Last Updated 5 ಆಗಸ್ಟ್ 2022, 5:08 IST
   

ತುಮಕೂರು: ಶಿರಾ ತಾಲ್ಲೂಕಿನ ಹಾಲ್ ದೊಡ್ಡೇರಿ ಗ್ರಾಮದ ಕೆರೆಯಲ್ಲಿ ಶುಕ್ರವಾರ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಪುಟ್ಟಸಿದ್ದಣ್ಣ (68) ಮೃತಪಟ್ಟಿದ್ದಾರೆ.

ತುಮಕೂರು ತಾಲ್ಲೂಕಿನ ಕೋಡಿತಿಮ್ಮಣ್ಣ ಹಳ್ಳಿ ಗ್ರಾಮದ ಪುಟ್ಟಸಿದ್ದಣ್ಣ ಕೆರೆಯಲ್ಲಿ ಮೀನು ಹಿಡಿಯುವಾಗ ನೀರಿನ ರಭಸದಲ್ಲಿ ಕೊಚ್ಚಿ ಹೋಗಿದ್ದಾರೆ.

ಇವರ ಜೊತೆಯಲ್ಲಿದ್ದ ಮತ್ತೊಬ್ಬರು ಈಜಿಕೊಂಡು ಬಂದು ದಡ ಸೇರಿದ್ದಾನೆ. ಸ್ಥಳಕ್ಕೆ ಆಗ್ನಿಶಾಮಕ ದಳ ಹಾಗೂ ಪೊಲೀಸರು ಬಂದಿದ್ದು ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.