ADVERTISEMENT

ತುಮಕೂರು: ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬೈಕ್ ಸವಾರನ ರಕ್ಷಿಸಿದ ಜನತೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 6:21 IST
Last Updated 4 ಆಗಸ್ಟ್ 2022, 6:21 IST
   

ತುಮಕೂರು: ಕುಣಿಗಲ್ ತಾಲ್ಲೂಕಿನ ದೊಂಬರಹಟ್ಟಿ ಸೇತುವೆ ಮೇಲೆ ಗುರುವಾರ ಬೆಳಿಗ್ಗೆ ತೆರಳುತ್ತಿದ್ದ ಬೈಕ್ ಸವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಗ್ರಾಮಸ್ಥರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ತಾಲ್ಲೂಕಿನ ಹಾಲ್ಗೆರೆ ಗ್ರಾಮದ ಅರುಣ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ದೊಂಬರಹಟ್ಟಿ ಸೇತುವೆಯ ಮೇಲೆ ನೀರಿನ ರಭಸಕ್ಕೆ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದರು. ಸ್ವಲ್ಪ ದೂರದಲ್ಲಿ ಮರದ ಕೊಂಬೆ ಹಿಡಿದುಕೊಂಡು ರಕ್ಷಣೆ ಪಡೆದಿದ್ದರು. ಗ್ರಾಮಸ್ಥರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸಕಾಲದಲ್ಲಿ ರಕ್ಷಿಸಿದ್ದಾರೆ. ಬೈಕ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ

ADVERTISEMENT

ತುಮಕೂರು: ಮಧುಗಿರಿ ತಾಲ್ಲೂಕು ನಾಗಲಾಪುರ ಗ್ರಾಮದ ಸಮೀಪ ಬುಧವಾರ ರಾತ್ರಿ ಹಳ್ಳ ದಾಟುತ್ತಿದ್ದಾಗ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತ ಗ್ರಾಮದ ನಿವಾಸಿ ದ್ವಾರಪ್ಪ (69) ನೀರಿನಲ್ಲಿ ಕೊಚ್ಚಿಕೊಂಡು ಹೋದವರು. ಶವಕ್ಕಾಗಿ ತಾಲ್ಲೂಕು ಆಡಳಿತ, ಅಗ್ನಿಶಾಮಕ ಹಾಗೂ ಪೊಲೀಸರು ಹುಡುಕಾಟದಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.