ADVERTISEMENT

ಪೊಲೀಸ್ ಠಾಣೆಯಲ್ಲಿ ಟಿವಿ ಕದ್ದ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 16:08 IST
Last Updated 2 ಅಕ್ಟೋಬರ್ 2020, 16:08 IST

ತುಮಕೂರು: ನಗರದಲ್ಲಿರುವ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಟಿವಿ ಕಳ್ಳತನ ಮಾಡಿದ ಆರೋಪದ ಮೇಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಾರೇಹಳ್ಳಿಯ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಚೇರಿಯಲ್ಲಿ ರಾತ್ರಿ ವೇಳೆ ಯಾವುದೇ ಸಿಬ್ಬಂದಿ ಇರುವುದಿಲ್ಲ. ‌ಆರೋಪಿಗಳಿಂದ ಜಪ್ತಿ ಮಾಡಿದ್ದ ಆಭರಣಗಳನ್ನು ವಾರಸುದಾರರಿಗೆ ಇತ್ತೀಚೆಗೆ ವಾಪಸ್ ನೀಡಲಾಗಿತ್ತು. ಇದನ್ನು ಗಮನಿಸಿದ ಆರೋಪಿ ಕಚೇರಿಯಲ್ಲಿ ಮತ್ತಷ್ಟು ಆಭರಣಗಳು ಇವೆ ಎಂದು ಕಳ್ಳತನಕ್ಕೆ ಮುಂದಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್ ಕಳ್ಳತನದ ಆರೋಪದ ಮೇಲೆ ಈ ಹಿಂದೆ ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ‌ಪ್ರಕರಣ ಸಹ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಟಿವಿ ಕಳ್ಳತನಕ್ಕೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.