ADVERTISEMENT

ಮಧ್ಯಾಹ್ನ ಬಿಸಿಯೂಟಕ್ಕೆ ಸಿರಿಧಾನ್ಯ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 8:05 IST
Last Updated 5 ಜನವರಿ 2019, 8:05 IST
ಸಿರಿಧಾನ್ಯ ಮೇಳ ಉದ್ಘಾಟಿಸಿದ ಡಾ.ಪರಮೇಶ್ವರ ಅವರಿಗೆ ನೇಗಿಲು ನೀಡಿ ಸತ್ಕರಿಸಲಾಯಿತು
ಸಿರಿಧಾನ್ಯ ಮೇಳ ಉದ್ಘಾಟಿಸಿದ ಡಾ.ಪರಮೇಶ್ವರ ಅವರಿಗೆ ನೇಗಿಲು ನೀಡಿ ಸತ್ಕರಿಸಲಾಯಿತು   

ತುಮಕೂರು: ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ವಾರದಲ್ಲಿ ಒಂದು ದಿನ ಸಿರಿಧಾನ್ಯ ಊಟ ವ್ಯವಸ್ಥೆ ಮಾಡಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.

ನಗರದ ಗಾಜಿನ ಮನೆಯಲ್ಲಿ ಸಿರಿಧಾನ್ಯ ಮೇಳ ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರು, ರಾಜ್ಯದ ವಿವಿಧ ಕಡೆ ಇರುವ ಇಂದಿರಾ ಕ್ಯಾಂಟೀನ್ ಗಳಲ್ಲೂ ಒಂದು ದಿನ ಸಿರಿಧಾನ್ಯ ಊಟ ವ್ಯವಸ್ಥೆ ಮಾಡಲು ಪರಿಶೀಲನೆ ನಡೆಸಲಾಗುವುದು. ಇದರಿಂದ ಜನರ ಆರೋಗ್ಯವೂ ಸುಧಾರಿಸುತ್ತದೆ. ರೈತರಿಗೂ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ADVERTISEMENT

ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರೊಂದಿಗೆ ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.