ADVERTISEMENT

ತವರಿಗೆ ತೆರಳಿದ 450 ಕಾರ್ಮಿಕರು

​ಪ್ರಜಾವಾಣಿ ವಾರ್ತೆ
Published 20 ಮೇ 2020, 14:31 IST
Last Updated 20 ಮೇ 2020, 14:31 IST

ತುಮಕೂರು: ಜಿಲ್ಲೆಯಿಂದ 450 ಕಾರ್ಮಿಕರು ಬುಧವಾರ ತಮ್ಮ ರಾಜ್ಯಗಳತ್ತ ಪ್ರಯಾಣ ಬೆಳೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ 18 ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕೋಲಾರ ಜಿಲ್ಲೆಯ ಮಾಲೂರು ರೈಲ್ವೆ ನಿಲ್ದಾಣ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಚಿಕ್ಕ ಬಾಣಾವರ ರೈಲ್ವೆ ನಿಲ್ದಾಣಕ್ಕೆ ಕಳುಹಿಸಿಕೊಡಲಾಯಿತು.

ಬಿಹಾರದ 300, ಜಾರ್ಖಂಡ್‌ನ 50, ಉತ್ತರಪ್ರದೇಶದ 100 ಮಂದಿ ಕಾರ್ಮಿಕರು ಇದ್ದರು. ಕಾರ್ಮಿಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.