ಕೊರಟಗೆರೆ: ಆಕಸ್ಮಿಕ ಬೆಂಕಿ ತಗುಲಿ ತಾಲ್ಲೂಕಿನ ಕಾಮೇನಹಳ್ಳಿಯ ತಿಮ್ಮರಾಜು ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಸುಟ್ಟು ಹೋಗಿದೆ.
ಕೊರಟಗೆರೆ, ಮಧುಗಿರಿ ರಸ್ತೆಯ ಕಾಮೇನಹಳ್ಳಿ ಬಳಿ ₹ 20 ಸಾವಿರ ಮೌಲ್ಯದ ರಾಗಿ ಹುಲ್ಲು ಬೆಂಕಿಗೆ ಆಹುತಿ ಯಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರಾದರೂ ಪ್ರಯೋಜನ ವಾಗಲಿಲ್ಲ. ಹಳೇ ವೈಷಮ್ಯದಿಂದ ಬಣವೆಗೆ ಬೆಂಕಿ ಹಚ್ಚಲಾಗಿದೆ ಎಂಬ ಸುಳ್ಳು ಸುದ್ದಿ ಹರಿದಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ನಂತರ ಆಕಸ್ಮಿಕವಾಗಿ ಬೆಂಕಿ ತಗುಲಿರುವುದು ಬೆಳಕಿಗೆ ಬಂದಿದೆ. ಪಿಎಸ್ಐ ಎಚ್. ಮುತ್ತುರಾಜು ಭೇಟಿ ನೀಡಿದ್ದರು. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.