ADVERTISEMENT

ಕುವೆಂಪು ಅವರ ವಿಚಾರಕ್ಕೆ ಕತ್ತರಿ ಹಾಕಿದ್ದೇ ಸಿದ್ದರಾಮಯ್ಯ ಸರ್ಕಾರ: ಅಶೋಕ

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 20:23 IST
Last Updated 19 ಜೂನ್ 2022, 20:23 IST
   

ತುಮಕೂರು:ಕುವೆಂಪು ಪಠ್ಯವಿಚಾರ ಕುರಿತು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಕುವೆಂಪು ಅವರ ವಿಚಾರವುಳ್ಳ ಪಠ್ಯಕ್ಕೆ ಕತ್ತರಿ ಹಾಕಿದ್ದೇ ಸಿದ್ದರಾಮಯ್ಯ ಸರ್ಕಾರ’ ಎಂದು ಸಚಿವ ಆರ್‌.ಅಶೋಕ ಹೇಳಿದರು.

‘ಆಗ ಇದರ ವಿರುದ್ಧ ಯಾರೂ ಧ್ವನಿ ಎತ್ತಲಿಲ್ಲ. ಈಗ ಬಿ.ಸಿ.ನಾಗೇಶ್ ಸಚಿವರಾದ ನಂತರ ಕುವೆಂಪು ಪಠ್ಯಕ್ಕೆ ಮತ್ತಷ್ಟು ಸೇರಿಸಲಾಗಿದೆ. ಇದರ ಬಗ್ಗೆ ಯಾರೂ ಮಾತಾಡಲಿಲ್ಲ’ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಟಿಪ್ಪು ಎಂದೂ ಕನ್ನಡವನ್ನು ಒಪ್ಪಿಕೊಂಡಿಲ್ಲ. ಜನರನ್ನು ಮತಾಂತರ ಮಾಡಿದ್ದ ಅವರನ್ನು ವೈಭವೀಕರಿಸಲಾಗಿತ್ತು. ಈಗ ಪಠ್ಯದಲ್ಲಿ ಕೆಂಪೇಗೌಡರ ಬಗ್ಗೆ ಸೇರಿಸಲಾಗಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.