ತುಮಕೂರು: ಹಣದ ವಿಚಾರವಾಗಿ ಕೊಲೆ ಮಾಡಿದ್ದ ಅಪರಾಧಿಗೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ.
ತುಕಾರಾಮಚಂದ್ರ ಪವಾರ್ ಶಿಕ್ಷೆಗೆಒಳಗಾದ ಅಪರಾಧಿ. ಶಿರಾ ತಾಲ್ಲೂಕು ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಗ್ರಾಮದ ಸಮೀಪ ಗುಡಿಸಲಿನಲ್ಲಿ ವಾಸವಿದ್ದ ಪಾಂಡು ಕಿಶನ್ ಹೀಲಂ ಬಳಿಗೆ 2019 ಜೂನ್ 2ರಂದು ತೆರಳಿದ್ದ ಪವಾರ್, ಹಣ ನೀಡುವಂತೆ ಕೇಳಿದ್ದಾನೆ. ಹಣ ಕೊಡದಿದ್ದಾಗ ಕೊಡಲಿಯಿಂದ ಹಲ್ಲೆ ನಡೆಸಿ ಹೀಲಂನನ್ನು ಕೊಲೆ ಮಾಡಿದ್ದಾನೆ.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಚ್.ಎಸ್.ಮಲ್ಲಿಕಾರ್ಜುನ ಸ್ವಾಮಿ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿ.ಎ.ಕವಿತ ವಾದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.