ತುಮಕೂರು: ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ಅಪರಾಧಿಗೆ ನ್ಯಾಯಾಧೀಶ ಎಚ್.ಎಸ್.ಮಲ್ಲಿಕಾರ್ಜುನ ಸ್ವಾಮಿ ಅವರು ಜೀವಾವಧಿ ಶಿಕ್ಷೆ ಹಾಗೂ ₹10,000 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ರವೀಂದ್ರ (35) ಶಿಕ್ಷೆಗೆ ಒಳಗಾದ ಕೊಲೆ ಅಪರಾಧಿ.
ನಗರದಲ್ಲಿ ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದ ರವೀಂದ್ರ 2019ರ ಏಪ್ರಿಲ್ನಲ್ಲಿ ನಗರದ ಗುಬ್ಬಿ ವೀರಣ್ಣ ರಂಗ ಮಂದಿರದ ಬಳಿಯ ಮಹಾನಗರ ಪಾಲಿಕೆ ಮಳಿಗೆ ಬಳಿ ತನ್ನ ಸ್ನೇಹಿತ ಸಲೀಂ ಬಾಬು ಬಳಿ ಗುಜರಿ ಸಾಮಗ್ರಿ ಮಾರಾಟ ಮಾಡಿ ಅದರಿಂದ ಬಂದ ಹಣ ಹಂಚಿಕೊಳ್ಳುವ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದರು. ಸಿಮೆಂಟ್ ಇಟ್ಟಿಗೆಯನ್ನು ಸಲೀಂ ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಿದ್ದನು.
ಅಪರಾಧಿಯು ದಂಡಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ 1 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.