ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗಾ ಹೋಬಳಿ ಮಣುವಿನಕುರಿಕೆ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಸೀತಾರಾಮಯ್ಯ ತನ್ನ ಪತ್ನಿ ರಾಜಮ್ಮ (42) ಅವರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.
ಈ ದಂಪತಿ 24 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು.
ರಾಜಮ್ಮ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸುತ್ತಿದ್ದ ಸೀತಾರಾಮಯ್ಯ ಅನೇಕ ಬಾರಿ ಹೆಂಡತಿಯೊಂದಿಗೆ ಜಗಳವಾಡಿದ್ದ. ಮಂಗಳವಾರವೂ ರಾತ್ರಿಯೂ ಈ ಸಂಬಂಧ ಜಗಳವಾಗಿದೆ. ಸೀತಾರಾಮಯ್ಯ ಸ್ಥಳದಲ್ಲೆ ಇದ್ದ ಬಂಡೆಗೆ ಪತ್ನಿಯ ತಲೆಯನ್ನು ಜಜ್ಜಿ ಕೊಲೆ ಮಾಡಿದ್ದಾನೆ.
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಪ್ರಭಾರ ಸಿಪಿಐ ಸರದಾರ್, ಎಎಸ್ಐಗಳಾದ ಮಂಜುನಾಥ್, ಯೋಗೀಶ್, ಸಿಬ್ಬಂದಿ ರಂಗನಾಥ್, ನಿತ್ಯಾನಂದ ಭೇಟಿ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.