ADVERTISEMENT

ಸೈನಿಕರಿಗೆ ಆತ್ಮಸ್ಥೈರ್ಯ; ಸಹಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 16:05 IST
Last Updated 20 ಜೂನ್ 2020, 16:05 IST
ಸಹಿ ಸಂಗ್ರಹ ಅಭಿಯಾನಕ್ಕೆ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು
ಸಹಿ ಸಂಗ್ರಹ ಅಭಿಯಾನಕ್ಕೆ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು   

ತುಮಕೂರು: ಗಡಿಯಲ್ಲಿ ದೇಶದ ರಕ್ಷಣೆಗೆ ನಿಂತಿರುವ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಹಾಲಪ್ಪ ಪ್ರತಿಷ್ಠಾನದಿಂದ ಸಿದ್ಧಗಂಗಾ ಮಠದಲ್ಲಿ ಶನಿವಾರ ಸಹಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಸಿದ್ಧಲಿಂಗಸ್ವಾಮೀಜಿ ಸಹಿ ಮಾಡುವ ಮೂಲಕ ಕಾರ್ಯಕ್ಕೆ ಚಾಲನೆ ನೀಡಿ, ‘ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ ಅಮಾನುಷ ಕೃತ್ಯ ಎಸಗಿದ್ದಾರೆ. ಸೈನಿಕರು ಪ್ರಾಣದ ಹಂಗು ತೊರೆದು ದೇಶವನ್ನು ರಕ್ಷಿಸುತ್ತಿದ್ದಾರೆ’ ಎಂದು ಸ್ಮರಿಸಿದರು.

ದೇಶ ಕಾಯುತ್ತಿರುವ ಪ್ರತಿಯೊಬ್ಬರಿಗೂ ಕೃತಜ್ಞತೆ ಅರ್ಪಿಸಬೇಕು. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಸೈನಿಕರ ಜೊತೆ ಇದ್ದೇವೆ ಎನ್ನುವ ಸಂದೇಶವನ್ನು ತಲುಪಿಸುವುದಕ್ಕೆ ಸಹಿ ಸಂಗ್ರಹ ಮಾಡುತ್ತಿರುವುದು ಶ್ಲಾಘನೀಯ ಎಂದರು.

ADVERTISEMENT

ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ, ‘ಸಿದ್ಧಗಂಗಾ ಮಠದ ಆವರಣದಿಂದ ಶ್ರೀಗಳ ಆಶೀರ್ವಾದದೊಂದಿಗೆ 10 ಸಾವಿರ ಸಹಿ ಸಂಗ್ರಹಮಾಡಿ ಸೈನ್ಯದ ಮುಖ್ಯಸ್ಥರಾದ ಜ.ಬಿಪಿನ್ ರಾವತ್ ಅವರಿಗೆ ಕಳುಹಿಸಿಕೊಡಲಾಗುವುದು’ ಎಂದರು.

ಮಾಜಿ ಸೈನಿಕರಾದ ರೇಣುಕಾಪ್ರಸಾದ್, ನಂಜುಂಡಯ್ಯ, ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಆರ್.ರೇವಣ್ಣ, ಎಂ.ಬಸವಯ್ಯ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.