ತುಮಕೂರು: ಹಿಂದುಳಿದಿರುವ ನದಾಫ್– ಪಿಂಜಾರ ಸಮುದಾಯದ ಪ್ರಗತಿಗೆ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ರಾಜ್ಯ ನದಾಫ್– ಪಿಂಜಾರ ಸಂಘದ ಪ್ರಮುಖರು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ‘ಇತರೆ ಸಮುದಾಯಗಳಿಗೆ ಅಭಿವೃದ್ಧಿ ನಿಗಮ ಮಾಡಿದಂತೆ ನಮಗೂ ಸ್ಥಾಪಿಸಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಮುದಾಯ ತೀರಾ ಹಿಂದುಳಿದಿದೆ’ ಎಂದು ತಿಳಿಸಿದ್ದಾರೆ. ಪಿಂಜಾರರು ಪ್ರವರ್ಗ–1ಕ್ಕೆ ಒಳಪಟ್ಟಿದ್ದರೂ ಯಾವ ಇಲಾಖೆ ವ್ಯಾಪ್ತಿಗೆ ಸೇರಿದೆಎಂಬುದು ಯಾರಿಗೂ ತಿಳಿದಿಲ್ಲ. ಜನಾಂಗದ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಜ. 15ರ ಒಳಗೆ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಧರಣಿ ನಡೆಸಲಾಗುವುದು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಬ್ರಾಹಿಂ ಖಲೀಲ್ ತಿಳಿಸಿದರು.
ಬಷೀರ್ ಅಹಮದ್, ಮಹಮ್ಮದ್ ದಾದಾಪೀರ್, ಮಹಮ್ಮದ್ ಜೈಹಿದ್, ಮುನೀರ್ ಮುನ್ನ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.