ADVERTISEMENT

ಆಶಾ ಕಾರ್ಯಕರ್ತೆಯರಿಗೆ ರಕ್ಷಣೆ ನೀಡಿ

​ಪ್ರಜಾವಾಣಿ ವಾರ್ತೆ
Published 31 ಮೇ 2020, 16:36 IST
Last Updated 31 ಮೇ 2020, 16:36 IST
ಚಿಕ್ಕನಾಯಕನಹಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರು ರಕ್ಷಣೆಗೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಸಂಘದ ತಾಲ್ಲೂಕು ಅಧ್ಯಕ್ಷೆ ಎಂ.ಜಿ.ಪುಷ್ಪಲತಾ ಇದ್ದರು
ಚಿಕ್ಕನಾಯಕನಹಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರು ರಕ್ಷಣೆಗೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಸಂಘದ ತಾಲ್ಲೂಕು ಅಧ್ಯಕ್ಷೆ ಎಂ.ಜಿ.ಪುಷ್ಪಲತಾ ಇದ್ದರು   

ಚಿಕ್ಕನಾಯಕನಹಳ್ಳಿ: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಪ್ರತಿ ದಿನ ಮನೆ ಮನೆಗೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರು ಕೆಲ ಕಿಡಿಗೇಡಿಗಳ ಮತ್ತು ಪಾನಮತ್ತರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ.
ಸೂಕ್ತ ರಕ್ಷಣೆ ಕೊಡಿ ಎಂದು ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದಾದ್ಯಂತ 2 ತಿಂಗಳಿನಿಂದ ಅವಿರತ ಸೇವೆಯಲ್ಲಿರುವ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗಳು ದಿನದಿಂದ ದಿನ ಹೆಚ್ಚಾಗುತ್ತಿರುವುದು ಆಶಾ ಸಮುದಾಯಕ್ಕೆ ಭಯ, ಆತಂಕ ಉಂಟು ಮಾಡಿದೆ. ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡುವವರನ್ನು ಉಗ್ರ ಶಿಕ್ಷೆಗೆ ಒಳಪಡಸಬೇಕು ಎಂದು ಮನವಿ ಮಾಡಿದರು.

ಕೋವಿಡ್ – 19 ಕಾರ್ಯ ನಿಯೋಜನೆ ಮುಗಿಯವವರೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಮಾಸಿಕ ₹10 ಸಾವಿರ ನೀಡಬೇಕು, ಅಗತ್ಯವಿರುವಷ್ಟು ಮಾಸ್ಕ್ ಹಾಗೂ ಸ್ಯಾನಿಟೈಸರ್, ಗ್ಲೌಸ್‌ಗಳನ್ನು ನೀಡಬೇಕು ಎಂದು ಮನವಿ ಮಾಡಿದರು.

ADVERTISEMENT

ಆಶಾ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಅಧ್ಯಕ್ಷೆ ಎಂ.ಜಿ.ಪುಷ್ಪಲತಾ, ಜಯಂತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.