ತುಮಕೂರು: ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸಲ್ಲ. ಸ್ಪರ್ಧಿಸಬಾರದು ಎಂದು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಶಾಸಕ ಕೆ.ಎನ್ ರಾಜಣ್ಣ ಘೋಷಣೆ ಮಾಡಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನನಗೀಗ 69 ವರ್ಷ. ಜನರ ಕೆಲಸಗಳನ್ನು ಓಡಾಡಿ ಮಾಡುವ ಶಕ್ತಿ ಕಡಿಮೆಯಾಗುತ್ತಿದೆ. ಹೀಗಾಗಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸದೇ ಇರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.
ಅಧಿಕಾರ ಎಂಬುದು ನನ್ನ ಬಳಿಯೇ ಇದ್ದರಷ್ಟೇ ಅದು ಅಧಿಕಾರ ಎಂದು ಭಾವಿಸುವುದು ತಪ್ಪು. ನಮಗೆ ವಿಶ್ವಾಸಿಕರ ಬಳಿ ಇದ್ದರೂ ಆ ಮೂಲಕ ಜನರಿಗೆ ಸೇವೆ ಮಾಡಬಹುದು ಎಂದು ಹೇಳಿದರು.
* ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.