ADVERTISEMENT

ಬಾಗಿಲು ತೆರೆದ ದೇಗುಲಗಳು

ಹೋಟೆಲ್ ಸಿಬ್ಬಂದಿಯಿಂದ ಸೋಂಕು ನಿವಾರಕ ಸಿಂಪಡಣೆ, ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 16:52 IST
Last Updated 7 ಜೂನ್ 2020, 16:52 IST
ತುಮಕೂರು ನಗರದಲ್ಲಿ ಹೋಟೆಲ್‌ ಸ್ವಚ್ಛತೆಯಲ್ಲಿ ತೊಡಗಿರುವ ಸಿಬ್ಬಂದಿ
ತುಮಕೂರು ನಗರದಲ್ಲಿ ಹೋಟೆಲ್‌ ಸ್ವಚ್ಛತೆಯಲ್ಲಿ ತೊಡಗಿರುವ ಸಿಬ್ಬಂದಿ   

ತುಮಕೂರು: ಹೋಟೆಲ್, ದೇವಸ್ಥಾನ, ಚರ್ಚ್, ಮಸೀದಿಗಳನ್ನು ಸೋಮವಾರದಿಂದ ತೆರೆಯಲು ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ನಗರದ ಹಲವು ಕಡೆಗಳಲ್ಲಿ ಹೋಟೆಲ್, ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಿದ್ಧತಾ ಕಾರ್ಯ ಭಾನುವಾರ ಭರದಿಂದ ನಡೆಯಿತು.

ಕಳೆದ ಎರಡು ತಿಂಗಳಿನಿಂದ ಮುಚ್ಚಿದ್ದ ನಗರದ ಹೋಟೆಲ್‌ಗಳು, ರೆಸ್ಟೋರೆಂಟ್‌, ಲಾಡ್ಜ್‌ಗಳನ್ನು ಸಿಬ್ಬಂದಿ ಶುಚಿಗೊಳಿಸಿದರು. ಹೋಟೆಲ್‍ಗಳ ಒಳ ಆವರಣ ಹಾಗೂ ಹೊರಭಾಗಕ್ಕೆ ಸೋಂಕು ನಿವಾರಕ ಸಿಂಪಡಿಸಿದರು.

ಟೇಬಲ್‍ವೊಂದರಲ್ಲಿ ಇಬ್ಬರಿಗೆ ಮಾತ್ರ ಕೂರಲು ಹಾಗೂ ಅಂತರ ಕಾಯ್ದುಕೊಳ್ಳಲು ಅನುಕೂಲವಾಗವಂತೆ ಅಳವಡಿಸಲಾಯಿತು. ಟೇಬಲ್, ಖುರ್ಚಿಗಳನ್ನು ಸ್ವಚ್ಛಗೊಳಿಸಿದರು.

ADVERTISEMENT

ದೇವಸ್ಥಾನದ ಆವರಣಗಳಲ್ಲಿಯೂ ಸೋಂಕು ನಿವಾರಕ ಸಿಂಪಡಿಸಲಾಯಿತು. ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದು, ಸೇವೆಗಳು ಇರುವುದಿಲ್ಲ.

ವೃದ್ಧರು, ಗರ್ಭಿಣಿಯರಿಗೆ ಪ್ರವೇಶವಿಲ್ಲ: ದೇವಸ್ಥಾನಗಳಲ್ಲಿ ಮುಖಗವಸು ಧರಿಸದೆ ಬರುವವರು, ಮಕ್ಕಳು, ವೃದ್ಧರು, ಗರ್ಭಿಣಿಯರಿಗೆ ಅವಕಾಶ ಇರುವುದಿಲ್ಲ. ಅಂತರ ಕಾಯ್ದುಕೊಂಡು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಹ್ಯಾಂಡ್ ಸ್ಯಾನಿಟೈಸರ್‌ ನೀಡಲಾಗುವುದು ಎಂದು ದೇವಸ್ಥಾನ ಸಮಿತಿಯ ಸದಸ್ಯರೊಬ್ಬರು ತಿಳಿಸಿದರು.

ಸರ್ಕಾರದ ಸೂಚನೆ ಮೇರೆಗೆ ತೀರ್ಥ, ಪ್ರಸಾದ ವ್ಯವಸ್ಥೆ ಇರುವುದಿಲ್ಲ. ಭಕ್ತರು ಹಣ್ಣು, ತೆಂಗಿನಕಾಯಿ ಅಥವಾ ಹೂ ತರಬಾರದು ಎಂದು ಅರ್ಚಕ ಶ್ರೀನಿವಾಸ್ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.