ADVERTISEMENT

ಬೈಕ್‌ ಅಪಘಾತ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 15:29 IST
Last Updated 6 ಫೆಬ್ರುವರಿ 2020, 15:29 IST

ತುರುವೇಕೆರೆ: ಕಾಡುಹಂದಿಗೆ ಗುದ್ದಿ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ತಾಲ್ಲೂಕಿನ ಕಸಬಾ ವ್ಯಾಪ್ತಿಯ ನೀರಗುಂದ ಗ್ರಾಮದ ನಿವಾಸಿ ಶಿವಸ್ವಾಮಿ(55) ಗುರುವಾರ ಮೃತಪಟ್ಟರು.

ಶಿವಸ್ವಾಮಿ ಜ.14ರ ರಾತ್ರಿ ಬೈಕ್‌ ಮೂಲಕ ಕೆ.ಬಿ.ಕ್ರಾಸ್‌ನಿಂದ ಸ್ವಗ್ರಾಮಕ್ಕೆ ತೆರಳುತ್ತಿರುವಾಗ ರಸ್ತೆಗೆ ದಿಢೀರನೆ ನುಗಿದ್ದ ಕಾಡುಹಂದಿಗೆ ಗುದ್ದಿ, ನೆಲಕ್ಕೆ ಬಿದ್ದು ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದರು. ಶಿವಸ್ವಾಮಿಯನ್ನು ದಾರಿಹೋಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸೇರಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಫೆ.5ರಬುಧವಾರ ಕೊನೆಯುಸಿರೆಳೆದಿದ್ದಾರೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.