ADVERTISEMENT

ಪರಮೇಶ್ವರ ಜನ್ಮದಿನ; ರಕ್ತದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 5:04 IST
Last Updated 7 ಆಗಸ್ಟ್ 2020, 5:04 IST
ಮಧುಗಿರಿ ತಾಲ್ಲೂಕಿನ ಪುರವರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ಅಭಿಮಾನಿಗಳ ವತಿಯಿಂದ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಯುವಕರು ರಕ್ತದಾನ ‌ಮಾಡಿದರು
ಮಧುಗಿರಿ ತಾಲ್ಲೂಕಿನ ಪುರವರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ಅಭಿಮಾನಿಗಳ ವತಿಯಿಂದ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಯುವಕರು ರಕ್ತದಾನ ‌ಮಾಡಿದರು   

ಮಧುಗಿರಿ: ತಾಲ್ಲೂಕಿನ ಪುರವರದಲ್ಲಿ ಶಾಸಕ ಡಾ.ಜಿ.ಪರಮೇಶ್ವರ ಅವರ ಜನ್ಮದಿನದ ಅಂಗವಾಗಿಗುರುವಾರ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ಅಭಿಮಾನಿಗಳ ಬಳಗದಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 70ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.

ಕಾಂಗ್ರೆಸ್ ಮುಖಂಡ ಸಂಕಾಪುರದ ದಿಲೀಪ್ ಮಾತನಾಡಿ, ರಕ್ತ ತಯಾರಿಸಲು ಯಾರಿಂದಲೂ ಸಾಧ್ಯವಿಲ್ಲ. ರಕ್ತ ದಾನ ಮಾಡಿದರೆ ರೋಗಿಯ ಜೀವ ಉಳಿಸಿದಂತಾಗುತ್ತದೆ ಎಂದರು.

ಮುಖಂಡ ಅರಳಾಪುರ ಶಿವಕುಮಾರ್ ಮಾತನಾಡಿ, ಕೊರೊನಾ ಸೋಂಕು ಹರಡುತ್ತಿರುವ ಕಾರಣ ರಕ್ತದ ಬೇಡಿಕೆ ಹೆಚ್ಚಾಗಿದ್ದು, ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವ ವನ್ನು ಉಳಿಸಿದಂತಾಗುತ್ತದೆ ಎಂದರು.

ADVERTISEMENT

ಆಸ್ಪತ್ರೆಯ ಮಹಮದ್ ಷೇಕ್, ಸಿಬ್ಬಂದಿ ಮಹಾಲಕ್ಷ್ಮಿ, ಮಂಜುನಾಥ್, ಯುವ ಮುಖಂಡರಾದ ಕುಮಾರಸ್ವಾಮಿ, ದರ್ಶನ್, ಅಜಯ್ ಕುಮಾರ್, ಅನಂತ, ಚಂದ್ರು, ರಂಗಧಾಮಯ್ಯ, ಸಂಜಯ್, ಸುಧಾಕರ, ಶಂಕರರೆಡ್ಡಿ, ಅಭಿಷೇಕ್, ಹನುಮಂತರಾಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.