ಕೊರಟಗೆರೆ: ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನವನ್ನು ದುರುಪಯೋಗ ಮಾಡಿರುವುದರ ಬಗ್ಗೆ ಸಿಇಒ ಅವರಿಗೆ ತಮ್ಮ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಲಂಚದ ನೀಡುವಾಗ ಪಿಡಿಒ ಮಂಜಮ್ಮ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಜಟ್ಟಿ ಅಗ್ರಹಾರ ಗ್ರಾಮದ ಸಾಮಾಜಿಕ ಕಾರ್ಯಕರ್ತ ನಾಗರಾಜು ಅವರು ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನ ದುರುಪಯೋಗವಾಗಿರುವ ಬಗ್ಗೆ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದರು.
ದೂರಿನನ್ವಯ ಸಿಇಒ ಅವರು ತನಿಖೆಗೂ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ದೂರನ್ನು ವಾಪಸ್ ಪಡೆಯಲು ಪಿಡಿಒ ಮಂಜಮ್ಮ ಅವರು ಗ್ರಾಮ ಪಂಚಾಯಿತಿ ಸದಸ್ಯ ಪ್ರಭಾಕರ ಅವರ ಮೂಲಕ ₹1000 ನೀಡುವುದಾಗಿ ನಾಗರಾಜು ಅವರಿಗೆ ಆಮಿಷ ವೊಡ್ಡಿದ್ದರು. ಅದರಂತೆ ಶುಕ್ರವಾರ ಸಂಜೆ ಗ್ರಾಮ ಪಂಚಾಯಿತಿ ಸದಸ್ಯರ ಮೂಲಕ ಹಣ ನೀಡುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಆರೋಪಿಗಳಾದ ಗ್ರಾಮಪಂಚಾಯಿತಿ ಸದಸ್ಯ ಪ್ರಭಾಕರ್ ಹಾಗೂ ಪಿಡಿಒ ಮಂಜಮ್ಮ ಅವರನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.