ಶಿರಾ: ‘ಹೋಟೆಲ್ಗಳಲ್ಲಿ ತಿಂಡಿಗಳಿಗೆ ಬೆಲೆ ಬೋರ್ಡ್ ಹಾಕಿದಂತೆ ಬಿಜೆಪಿ ಸರ್ಕಾರದಲ್ಲಿ ವರ್ಗಾವಣೆಗಳಿಗೆ ದರ ನಿಗದಿ ಮಾಡಲಾಗಿದೆ’ ಎಂದು ಶಾಸಕ ಡಾ.ಜಿ. ಪರಮೇಶ್ವರ ಆರೋಪಿಸಿದ್ದಾರೆ.
ನಗರದಲ್ಲಿ ಮಂಗಳವಾರ ಕಾಡುಗೊಲ್ಲ ಜನಾಂಗದ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದೆ ಎಂದು ವಾಗ್ದಾಳಿ ನಡೆಸಿದರು.
‘ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಪರ್ಸೆಂಟೇಜ್ ಸರ್ಕಾರ.ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು10 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಏಕೆ ಮೌನವಾಗಿದ್ದಾರೆ’ ಎಂದು ಪ್ರಶ್ನಿಸಿದರು.
‘ಬಿಜೆಪಿ ಸರ್ಕಾರ ರಾಜಾರೋಷವಾಗಿ ನಡೆಸುತ್ತಿರುವ ವರ್ಗಾವಣೆ ದಂಧೆ ಪ್ರಧಾನಿಗೆ ಕಾಣುತ್ತಿಲ್ಲವೇ? ಇದು ಎಷ್ಟು ಪರ್ಸೆಂಟ್ ಸರ್ಕಾರ ಎಂಬುವುದನ್ನು ಪ್ರಧಾನಿಯೇ ಹೇಳಬೇಕು’ ಎಂದು ಪರಮೇಶ್ವರ ತಿರುಗೇಟು ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.