ADVERTISEMENT

ಪಾವಗಡ: ಕ್ರೇನ್ ಡಿಕ್ಕಿ, ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2022, 5:12 IST
Last Updated 23 ಅಕ್ಟೋಬರ್ 2022, 5:12 IST

ಪಾವಗಡ: ತಾಲ್ಲೂಕಿನ ಕಣಿವೇನಹಳ್ಳಿ ಗೇಟ್ ಬಳಿ ಭಾನುವಾರ ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕ್ರೇನ್ ಡಿಕ್ಕಿ ಹೊಡೆದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕಣಿವೇನಹಳ್ಳಿ ಗ್ರಾಮದ ಶ್ರೀನಿವಾಸ್ (54) ಮೃತರು.

ಕಣಿವೇನಹಳ್ಳಿ ಗೇಟ್ ಬಳಿ ದ್ವಿಚಕ್ರ ವಾಹನದೊಂದಿಗೆ ನಿಂತಿದ್ದಾಗ ಪಟ್ಟಣದ ಕಡೆಯಿಂದ ಬರುತ್ತಿದ್ದ ಕ್ರೇನ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.