ADVERTISEMENT

ಪಾವಗಡ | ಸಿಡಿಲು ಬಡಿದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2024, 14:48 IST
Last Updated 29 ಸೆಪ್ಟೆಂಬರ್ 2024, 14:48 IST
ಶ್ರೀನಿವಾಸ್
ಶ್ರೀನಿವಾಸ್    

ಪಾವಗಡ: ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದ ಶ್ರೀನಿವಾಸ್ (45) ಸಿಡಿಲು ಬಡಿದು‌ ಭಾನುವಾರ ಮೃತಪಟ್ಟಿದ್ದಾರೆ.

ಗ್ರಾಮದಲ್ಲಿ‌ ಚಿಲ್ಲರೆ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಭಾನುವಾರ ಗುಡುಗು ಸಹಿತ ಮಳೆ ಬಿದ್ದಾಗ ಮರದ ಪಕ್ಕವಿದ್ದ ಪೆಟ್ಟಿಗೆ ಅಂಗಡಿಗೆ ಸಿಡಿಲು ಬಡಿದಿದೆ. ಅಂಗಡಿ ಬಳಿಯ ಚಪ್ಪರದಡಿ ಇದ್ದ ಶ್ರೀನಿವಾಸ್ ಮೃತಪಟ್ಟಿದ್ದಾರೆ.

ಶ್ರೀನಿವಾಸ್ ಪತ್ರಿಕಾ ವಿತರಕರಾಗಿಯೂ ಕಾರ್ಯನಿರ್ವಹಿಸಿದ್ದರು.

ADVERTISEMENT

ಅರಸಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.