ಕುಣಿಗಲ್: ತಾಲ್ಲೂಕು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಬಿಜೆಪಿಯ ಡಿ.ಕೃಷ್ಣಕುಮಾರ್ ಮತ್ತು ಉಪಾಧ್ಯಕ್ಷರಾಗಿ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಿಎಲ್ಡಿ ಬ್ಯಾಂಕ್ನಲ್ಲಿ 14 ಬಿಜೆಪಿ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದು, ಸ್ಪಷ್ಟ ಬಹುಮತವಿದ್ದು. ಬಹುತೇಕ ನಿರ್ದೇಶಕರು ಡಿ.ಕೃಷ್ಣಕುಮಾರ್ ಅವರೇ ಅಧ್ಯಕ್ಷ ರಾಗ ಬೇಕು ಎಂದು ಬಯಸಿದ ಕಾರಣ ಅವಿರೋಧ ಆಯ್ಕೆ ನಡೆಯಿತು. ತಹಶೀಲ್ದಾರ್ ವಿಶ್ವನಾಥ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಕುಮಾರ್, ‘ಪೀಕಾರ್ಡ್ ಅಧ್ಯಕ್ಷರು ಕುಣಿಗಲ್, ಶಿರಾ ಮತ್ತು ಪಾವಗಡ ಶಾಖೆಗಳನ್ನು ವಿಲೀನಗೊಳಿಸಲು ಸಂಚು ಮಾಡಿದ್ದರು. ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ಸಂಚು ವಿಫಲವಾಗಿದೆ. ಸಾಲದ ಮರುಪಾವತಿ ಇಲ್ಲದೆ ಸಹಕಾರಿ ಬ್ಯಾಂಕ್ಗಳು ಅಸ್ಥಿತ್ವ ಕಳೆದುಕೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ ಸರ್ಕಾರಗಳು ಸಹಕಾರ ಸಂಘಗಳ ಉಳಿವಿಗೆ ಕಾರ್ಯತಂತ್ರ ರೂಪಿಸಬೇಕಿದೆ’ ಎಂದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಬಲರಾಂ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.