ADVERTISEMENT

ಆದೇಶ ಪಾಲಿಸದ ಪಿಎಸ್‌ಐ ಅಮಾನತು

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 16:33 IST
Last Updated 3 ಏಪ್ರಿಲ್ 2020, 16:33 IST

ತುಮಕೂರು: ಕೆಲಸಕ್ಕೆ ವರದಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಪಿಎಸ್‌ಐ ಮಂಜುನಾಥ್ ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕೆಲಸದಿಂದ ಅಮಾನತುಗೊಳಿಸಿದ್ದಾರೆ.

ಮಂಜುನಾಥ್ ಕೊರಟಗೆರೆ ಠಾಣೆಯಿಂದ ಚಿಕ್ಕನಾಯಕನಹಳ್ಳಿ ಠಾಣೆಗೆ ವರ್ಗಾವಣೆ ಆಗಿದ್ದರು. ಕೊರಟಗೆರೆ ಠಾಣೆಯಿಂದ ಬಿಡುಗಡೆಯಾಗಿದ್ದರೂ ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ಕೆಲಸಕ್ಕೆ ವರದಿ ಮಾಡಿಕೊಂಡಿರಲಿಲ್ಲ. ಮಂಜುನಾಥ್ ಇಲಾಖೆ ಆದೇಶ ಪಾಲಿಸದ ಕಾರಣಕ್ಕೆ ಅವರನ್ನು ಅಮಾನತುಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT