ADVERTISEMENT

ರೈಲಿಗೆ ತಲೆಕೊಟ್ಟು ಕಾನ್‌ಸ್ಟೆಬಲ್ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 6:19 IST
Last Updated 12 ಡಿಸೆಂಬರ್ 2020, 6:19 IST
ಯಲ್ಲಾಲಿಂಗ ಮೇಟಿ
ಯಲ್ಲಾಲಿಂಗ ಮೇಟಿ   

ಕುಣಿಗಲ್ (ತುಮಕೂರು ಜಿ): ಪಟ್ಟಣ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಯಲ್ಲಾಲಿಂಗ ಮೇಟಿ (26) ಶನಿವಾರ ಬೆಳಿಗ್ಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌

ಅನಾರೋಗ್ಯ ಬಳಲುತ್ತಿದ್ದ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಯಲ್ಲಾಲಿಂಗಮೇಟಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಗ್ರಾಮದವರು. 2015ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.