ADVERTISEMENT

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ: ಖಾಸಗಿ ಬಸ್ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 6:30 IST
Last Updated 7 ಏಪ್ರಿಲ್ 2021, 6:30 IST
ಖಾಸಗಿ ಬಸ್‌ಗಳ ಸಂಖ್ಯೆಯೂ ಕಡಿಮೆ
ಖಾಸಗಿ ಬಸ್‌ಗಳ ಸಂಖ್ಯೆಯೂ ಕಡಿಮೆ   

ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ನೌಕರರ ಮುಷ್ಕರದಿಂದಾಗಿ ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಗರದಲ್ಲಿ ಖಾಸಗಿ ಬಸ್ ವ್ಯವಸ್ಥೆ ಮಾಡಲಾಗಿತ್ತು.

ಖಾಸಗಿ ಬಸ್‌ಗಳ ಸಂಖ್ಯೆಯೂ ಕಡಿಮೆ ಇದ್ದು, ಪ್ರಯಾಣಿಕರು ಪರದಾಡಿದರು.

ತುಮಕೂರು– ಬೆಂಗಳೂರು ನಡುವೆ ಪ್ರಯಾಣಿಕರ ದಟ್ಟಣೆಯನ್ನು ನೋಡಿಕೊಂಡು ಖಾಸಗಿ ಬಸ್‌ಗಳು ಸಂಚರಿಸಿದವು.

ADVERTISEMENT

ಹೊರ ಜಿಲ್ಲೆ ಹಾಗೂ ದೂರದ ಪ್ರದೇಶಗಳಿಗೆ ಬಸ್‌ಗಳು ಸಂಚರಿಸಲಿಲ್ಲ. ನಗರದಲ್ಲಿ ಜನರು ಆಟೊಗಳಿಗೆ ಮೊರೆ ಹೋದರು. ಆದರೆ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ದೃಶ್ಯ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.