ADVERTISEMENT

ಆಸ್ತಿ ವಿವಾದ: ಮಗನ ಮೇಲೆ ಹಲ್ಲೆ ನಡೆಸಿದ ತಂದೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 5:54 IST
Last Updated 19 ಜನವರಿ 2023, 5:54 IST

ಕೊರಟಗೆರೆ: ಆಸ್ತಿ ವಿಚಾರವಾಗಿ ಪ್ರಾರಂಭವಾದ ಜಗಳದಲ್ಲಿ ತಂದೆಯೇ ಮಗನ ತಲೆಗೆ ಬಲವಾಗಿ ಹೊಡೆದ ಪರಿಣಾಮ ಆತ ಸಾವು ಬದುಕಿನ‌ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತಾಲ್ಲೂಕಿನ ದೊಡ್ಡನರಸಯ್ಯನಪಾಳ್ಯದಲ್ಲಿ ನಡೆದಿದೆ.

ಲಕ್ಷ್ಮಿಕಾಂತರಾಜು(45) ತಂದೆಯಿಂದ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೃಷ್ಣಪ್ಪ(65) ಹಲ್ಲೆ ಮಾಡಿದ ತಂದೆ. ಆಸ್ತಿ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಅದೇ ಕಾರಣಕ್ಕೆ ಬುಧವಾರ ಬೆಳಿಗ್ಗೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೃಷ್ಣಪ್ಪ ಮಗ ಲಕ್ಷ್ಮಿಕಾಂತರಾಜುಗೆ ಗುದ್ದಲಿ ಕಾವಿನಿಂದ ತಲೆಗೆ ಹೊಡೆದಿದ್ದಾರೆ. ಬಲವಾಗಿ ತಲೆಗೆ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೆದುಳು ನಿಷ್ಕ್ರಿಯಗೊಂಡಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದಾರೆಂದು ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.‌‌ ಸ್ಥಳಕ್ಕೆ ಸಿಪಿಐ ಕೆ. ಸುರೇಶ್, ಪಿಎಸ್ಐ ಜಿ. ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.