ADVERTISEMENT

ಬ್ಯಾಂಕ್‌ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 4:13 IST
Last Updated 15 ಅಕ್ಟೋಬರ್ 2020, 4:13 IST
ಕೊಡಿಗೇನಹಳ್ಳಿ ಹೋಬಳಿ ಕಡಗತ್ತೂರು ಗ್ರಾಮದ ಎಸ್‌ಬಿಐ ಸಿಬ್ಬಂದಿ ವಿರುದ್ಧ ಗ್ರಾಹಕರು ಪ್ರತಿಭಟನೆ ನಡೆಸಿದರು
ಕೊಡಿಗೇನಹಳ್ಳಿ ಹೋಬಳಿ ಕಡಗತ್ತೂರು ಗ್ರಾಮದ ಎಸ್‌ಬಿಐ ಸಿಬ್ಬಂದಿ ವಿರುದ್ಧ ಗ್ರಾಹಕರು ಪ್ರತಿಭಟನೆ ನಡೆಸಿದರು   

ಕೊಡಿಗೇನಹಳ್ಳಿ: ಹೋಬಳಿಯ ಕಡಗತ್ತೂರು ಗ್ರಾಮದಲ್ಲಿರುವ ಎಸ್‌ಬಿಐ ಬ್ಯಾಂಕ್‌ ಸಿಬ್ಬಂದಿ ಗ್ರಾಹಕರ ಸಮಸ್ಯೆ
ಗಳಿಗೆ ಸರಿಯಾಗಿ ಸ್ಪಂದಿಸದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಹಕರು ಪ್ರತಿಭಟನೆ ನಡೆಸಿದರು.

ಆರು ತಿಂಗಳಿಂದ ಪಾಸ್ ಬುಕ್ ಎಂಟ್ರಿ ಮಾಡಿಕೊಡುತ್ತಿಲ್ಲ. ಕೃಷಿ ಸಾಲ, ಬಂಗಾರದ ಮೇಲೆ ಸಾಲ ನೀಡಲು ಸತಾಯಿಸುತ್ತಾರೆ. ಪಿಂಚಣಿ ಹಣ ಪರಿಶೀಲಿಸಿ, ಎಂಟ್ರಿ ಮಾಡಿಕೊಡಲು ತಾಂತ್ರಿಕ ನೆಪವೊಡ್ಡುತ್ತಾರೆ ಎಂದು ಗ್ರಾಹಕರು ಆರೋಪಿಸಿದರು.

‘ಬ್ಯಾಂಕ್‌ನಲ್ಲಿ ಸಿಬ್ಬಂದಿ ಕೊರತೆ ಇದೆ. ಆದರೂ ಗ್ರಾಹಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಪಾಸ್‌ಬುಕ್‌, ಪಿಂಚಣಿ ಹಣ ಎಂಟ್ರಿ ಮಾಡುವುದನ್ನು ಹೊರತುಪಡಿಸಿ ಉಳಿದೆಲ್ಲಾ ಕೆಲಸಗಳನ್ನು ನಾವೇ ಮಾಡುತ್ತಿದ್ದೇವೆ’ ಎಂದು ಎಸ್‌ಬಿಐ ಕಡಗತ್ತೂರು ಶಾಖೆ ವ್ಯವಸ್ಥಾಪಕ ವಿನೋದ್‌ ಹೇಳಿದರು.

ADVERTISEMENT

ಪ್ರತಿಭಟನೆಯಲ್ಲಿ ಜಗನ್ನಾಥರೆಡ್ಡಿ, ತಿಮ್ಮಾರೆಡ್ಡಿ, ಶ್ರೀನಿವಾಸ್, ನಿಖಿಲ್, ಆದಿ, ಗಂಗಾಧರ್, ವೀರಭದ್ರಪ್ಪ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.