ಗುಬ್ಬಿ: ಪರಿಶಿಷ್ಟರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಕೊನೆಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಚನ್ನಬಸವೇಶ್ವರದೇವಾಲಯ ಆವರಣದಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ಬಂದು ಪ್ರತಿಭಟಿಸಿದರು. ಪರಿಶಿಷ್ಟರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಬೇಕು ಎಂದು ಆಗ್ರಹಿಸಿದರು.
ತಾಲ್ಲೂಕಿನಲ್ಲಿ ಪರಿಶಿಷ್ಟರ ಕಾಲೊನಿಗಳು ಇರುವ ಕಡೆ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಬೇಕು. ಬಗರ್ ಹುಕುಂ ಸಾಗುವಳಿಯಲ್ಲಿ ಜಮೀನು ಮಂಜೂರಾದವರಿಗೆ ಖಾತೆ, ಪಹಣಿ ಮಾಡಿಕೊಡಬೇಕು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟರ ದೌರ್ಜನ್ಯ ಹಿತರಕ್ಷಣಾ ಸಮಿತಿ ಸಭೆ ಕರೆಯಬೇಕು. ಪರಿಶಿಷ್ಟರ ಕೇರಿಗಳಲ್ಲಿ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಮಿತಿ ಅಧ್ಯಕ್ಷ ರಾಜೇಶ್, ತಾಲ್ಲೂಕು ಸಮಿತಿ ಅಧ್ಯಕ್ಷ ಸೋಮು, ಉಪಾಧ್ಯಕ್ಷ ಸೋಮಶೇಖರ್, ಪದಾಧಿಕಾರಿಗಳಾದ ನಾರಾಯಣ್ ಮಂಜುನಾಥ, ಸುರೇಶ್, ನವೀನ್ ಕುಮಾರ್, ನಿಧಿ ಕುಮಾರ್, ಕೃಷ್ಣಮೂರ್ತಿ, ಮಹೇಶ್, ವೆಂಕಟೇಶ್, ಬಲರಾಜ್, ರಂಗಸ್ವಾಮಿ, ಅಮರ್, ನರಸಿಂಹರಾಜು ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.