ADVERTISEMENT

ಹಾಗಲವಾಡಿ: ಹಳ್ಳಿಗಳಿಗೂ ಸೌಲಭ್ಯ ನೀಡಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 3:59 IST
Last Updated 16 ಮಾರ್ಚ್ 2021, 3:59 IST
ಮೂಗನಾಯಕನ ಕೋಟೆಯಲ್ಲಿ ಪೂರ್ಣಗೊಂಡ ಸಿ.ಸಿ ರಸ್ತೆಯನ್ನು ತಾಲ್ಲೂಕು ಪಂಚಾಯಿತಿ ಸದಸ್ಯ ಆ.ನ.ಲಿಂಗಪ್ಪ ವೀಕ್ಷಿಸಿದರು
ಮೂಗನಾಯಕನ ಕೋಟೆಯಲ್ಲಿ ಪೂರ್ಣಗೊಂಡ ಸಿ.ಸಿ ರಸ್ತೆಯನ್ನು ತಾಲ್ಲೂಕು ಪಂಚಾಯಿತಿ ಸದಸ್ಯ ಆ.ನ.ಲಿಂಗಪ್ಪ ವೀಕ್ಷಿಸಿದರು   

ಹಾಗಲವಾಡಿ: ನಗರಗಳು ಮಾತ್ರವಲ್ಲದೆ ಗ್ರಾಮೀಣ ಭಾಗಕ್ಕೂ ಮೂಲ ಸೌಲಭ್ಯಗಳನ್ನು ಒದಗಿಸಿಕೊಡುವುದು ಸರ್ಕಾರದ ಆದ್ಯತೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಆ.ನ.ಲಿಂಗಪ್ಪ ಹೇಳಿದರು.

ಗುಬ್ಬಿ ತಾಲ್ಲೂಕಿನ ಮೂಗನಾಯಕನಕೋಟೆ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಡಾ.ನವ್ಯ ಚಂದ್ರಶೇಖರಬಾಬು ಅವರ ಅನುದಾನದಲ್ಲಿ ಸಿ.ಸಿ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಜಿಲ್ಲಾ ಮಾಜಿ ಪಂಚಾಯಿತಿ ಸದಸ್ಯ ಚಂದ್ರಶೇಖರಬಾಬು ಮಾತನಾಡಿ, ನಿಟ್ಟೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ADVERTISEMENT

ತಾಲ್ಲೂಕು ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಎಂ.ಎನ್.ಭೀಮಶೆಟ್ಟಿ, ಮುಖಂಡ ಸಿದ್ದರಾಮಣ್ಣ, ವಕೀಲ ಕಾಂತರಾಜು, ಓಂಕಾರಮೂರ್ತಿ, ನಟರಾಜು, ಬಸವರಾಜು, ಕೃಷ್ಣಮೂರ್ತಿ, ಸೋಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.