ADVERTISEMENT

ಶೇ 89 ಅಂಕ ಬಂದರೂ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 17:42 IST
Last Updated 14 ಜುಲೈ 2020, 17:42 IST

ತುಮಕೂರು: ನಗರದ ಕ್ಯಾತ್ಸಂದ್ರ ಬಳಿಯ ಬಸವಾಪಟ್ಟಣದ ಚೇತನ್ ದ್ವಿತೀಯ ಪಿಯುಸಿಯಲ್ಲಿ ಶೇ 89ರಷ್ಟು ಅಂಕ ಪಡೆದಿದ್ದರೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ವಿದ್ಯಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಇನ್ನೂ ಹೆಚ್ಚಿನ ಅಂಕ ಬರಬೇಕಿತ್ತು ಎನ್ನುವ ಕೊರಗಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕ್ಯಾತ್ಸಂದ್ರ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.