ಚಿಕ್ಕನಾಯಕನಹಳ್ಳಿ (ತುಮಕೂರು): ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದತಾಲ್ಲೂಕಿನ ಮೂರು ವರ್ಷದ ವಿದ್ಯಾರ್ಥಿಯನ್ನು ಗದರಿಸಲು ಅಂಗನವಾಡಿ ಕೇಂದ್ರದ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿಕಡ್ಡಿಯಿಂದ ಸುಟ್ಟಿದ್ದಾರೆ. ಇದರಿಂದ ಆತನ ಗುಪ್ತಾಂಗ ಮತ್ತು ತೊಡೆಯ ಬಳಿ ಸುಟ್ಟ ಗಾಯಗಳಾಗಿವೆ.
ಇತ್ತೀಚೆಗೆ ನಡೆದ ಈ ಘಟನೆ ಗೊತ್ತಾಗುತ್ತಲೇ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಸೋಮವಾರ ಗ್ರಾಮಕ್ಕೆ ಧಾವಿಸಿ ಮಕ್ಕಳು, ಶಿಕ್ಷಕಿ, ಸಹಾಯಕಿ ಮತ್ತು ಬಾಲಕನ ಪೋಷಕರ ಹೇಳಿಕೆ ಪಡೆದಿದ್ದಾರೆ. ಕೇಂದ್ರದ ಶಿಕ್ಷಕಿ ಹಾಗೂ ಸಹಾಯಕಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಾಲ್ಲೂಕು ಅಧಿಕಾರಿ ನೋಟಿಸ್ ನೀಡಿ ತಪ್ಪೋಪ್ಪಿಗೆ ಪತ್ರ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.