ADVERTISEMENT

ತಿಪಟೂರು: ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 17:44 IST
Last Updated 11 ಏಪ್ರಿಲ್ 2019, 17:44 IST

ತಿಪಟೂರು: ತಾಲ್ಲೂಕಿನ ನಾಗರಘಟ್ಟ, ಕೈದಾಳ ಸುತ್ತಮುತ್ತ ಗುರುವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಉತ್ತಮ ಮಳೆ ಸುರಿದಿದೆ.

ಬಿರುಗಾಳಿಯಿಂದ ಆರಂಭವಾದ ಮಳೆ ಗುಡುಗು, ಸಿಡಿಲಿನ ಆರ್ಭಟ ತೋರಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಬಿರುಗಾಳಿಯಿಂದ ಹಲವು ತೆಂಗಿನ ಮರಗಳು ಉರುಳಿವೆ. ಕೆಲವೆಡೆ ರಸ್ತೆ ಪಕ್ಕದ ಮರಗಳು ಉರುಳಿದ್ದರಿಂದ ಸಂಚಾರಕ್ಕೆ ತೊಡಕಾಗಿತ್ತು. ತಾಲ್ಲೂಕಿನ ಕೆಲವೆಡೆ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT