ಗುಬ್ಬಿ: ತಾಲ್ಲೂಕಿನ ಕಸಬಾ ಹೋಬಳಿ ಭೂತಪ್ಪನಹಟ್ಟಿಯಲ್ಲಿ ಬುಧವಾರ ಸಿಡಿಲು ಬಡಿದು ರೈತ ಚಿತ್ತಯ್ಯ ಅವರಿಗೆ ಸೇರಿದ ಮೂರು ಕುರಿಗಳು ಸತ್ತಿವೆ.
ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದೆ.
ಪ್ರಕೃತಿ ವಿಕೋಪದಡಿ ರೈತರಿಗೆ ಪರಿಹಾರ ನೀಡಲು ಅವಕಾಶ ಇರುವುದರಿಂದ ನಿಯಮಾನಸಾರ ಕ್ರಮ ಕೈಗೊಂಡು, ಪಶು ವೈದ್ಯಾಧಿಕಾರಿಗಳ ವರದಿಯ ನಂತರ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಪ್ರಕೃತಿ ವಿಕೋಪ ಎದುರಿಸಲು ತಾಲ್ಲೂಕು ಆಡಳಿತ ಸಜ್ಜಾಗಿದೆ ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.