ADVERTISEMENT

ತುಮಕೂರು: ಲಕ್ಷ ಜನರಿಗೆ ಊಟ; ಅಭಿನಂದನಾರ್ಹ

​ಪ್ರಜಾವಾಣಿ ವಾರ್ತೆ
Published 8 ಮೇ 2020, 10:36 IST
Last Updated 8 ಮೇ 2020, 10:36 IST
ಆರ್‌.ಆರ್.ಅಭಿಮಾನಿ ಬಳಗ ಹಾಗೂ ಯುವಕಾಂಗ್ರೆಸ್‌ನ ದಾಸೋಹ ವ್ಯವಸ್ಥೆಯ ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರ ನಿಯೋಗ ಆಹಾರ ಪೊಟ್ಟಣ ವಿತರಿಸಿತು
ಆರ್‌.ಆರ್.ಅಭಿಮಾನಿ ಬಳಗ ಹಾಗೂ ಯುವಕಾಂಗ್ರೆಸ್‌ನ ದಾಸೋಹ ವ್ಯವಸ್ಥೆಯ ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರ ನಿಯೋಗ ಆಹಾರ ಪೊಟ್ಟಣ ವಿತರಿಸಿತು   

ತುಮಕೂರು: ಸರ್ಕಾರದ ನೆರವಿಲ್ಲದೆ ಗೆಳೆಯರು ಮತ್ತು ದಾನಿಗಳ ಸಹಕಾರದಿಂದ ಒಂದು ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಿರುವುದು ನಿಜಕ್ಕೂ ಮೆಚ್ಚುವ ಕೆಲಸ. ತುಮಕೂರು ಸೇರಿದಂತೆ ರಾಜ್ಯದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಇದೇ ರೀತಿಯ ಕಾರ್ಯದಲ್ಲಿ ತೊಡಗಿದ್ದಾರೆ. ಇವರೆಲ್ಲರೂ ಅಭಿನಂದನಾರ್ಹರು ಎಂದು ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿದರು.

ನಗರದ ಬೀರೇಶ್ವರ ಕಲ್ಯಾಣ ಮಂಟಪದಲ್ಲಿ ಯುವಕಾಂಗ್ರೆಸ್ ಹಾಗೂ ಆರ್.ಆರ್.ಅಭಿಮಾನಿ ಬಳಗ ಆಯೋಜಿಸಿರುವ ದಾಸೋಹ ತಯಾರಿಕಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಮುಖಂಡ ನರೇಂದ್ರಸ್ವಾಮಿ ಮಾತನಾಡಿ, ಇಲ್ಲಿ ಸಾಧನೆಯೇ ಮಾತನಾಡಿದೆ. ರುಚಿ, ಶುಚಿಯ ಜೊತೆಗೆ ಸಂಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ಆಹಾರ ತಲುಪುವಂತೆ ಮಾಡಿರುವುದು ಒಳ್ಳೆಯ ಕೆಲಸ. ಆರ್.ರಾಜೇಂದ್ರ ಸೇರಿದಂತೆ ಅವರ ಜತೆ ಕೈ ಜೋಡಿಸಿದ ಎಲ್ಲರಿಗೂ ಕೆಪಿಸಿಸಿಯಿಂದ ಅಭಿನಂದಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ, ವಿದ್ಯಾವಂತ ಯುವಜನರು, ತಮ್ಮ ಬಿಡುವಿನ ವೇಳೆಯನ್ನು ಬಡವರು, ಕಷ್ಟದಲ್ಲಿ ಇರುವವರ ಸೇವೆಗೆ ಮೀಸಲಿಟ್ಟಿರುವುದು ಮೆಚ್ಚುವಂತದ್ದು ಎಂದರು.

ಮುಖಂಡರಾದ ಎಚ್.ಸಿ.ಬಾಲಕೃಷ್ಣ, ರಘುವೀರಗೌಡ, ಆರ್.ರಾಜೇಂದ್ರ, ಯುವಕರಾದ ಆರ್.ರವೀಂದ್ರ, ಕೆ.ಎ.ದೇವರಾಜು, ಗಂಗಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.