ತುಮಕೂರು: ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ, ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಕಿಬ್ಬನಹಳ್ಳಿ ಠಾಣೆ ಕಾನ್ಸ್ಟೆಬಲ್ ಎಚ್.ಎನ್.ಮಂಜುನಾಥ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಬಿ.ಕ್ರಾಸ್ನ ಇಂಪೀರಿಯಲ್ ಮಿಲ್ಟ್ರಿ ಹೋಟೆಲ್ನಲ್ಲಿ ಮಂಗಳವಾರ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು. ನೊಂದ ಮಹಿಳೆ ಸಿ.ಸಿ ಟಿ.ವಿ ದೃಶ್ಯಾವಳಿ ಸಹಿತ ದೂರು ನೀಡಿದ್ದು, ಬುಧವಾರ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.