ಜೈಲು (ಪ್ರಾತಿನಿಧಿಕ ಚಿತ್ರ)
ಗುಬ್ಬಿ: ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಅವರ ಸಾವಿಗೆ ಕಾರಣರಾಗಿದ್ದ ಕಾರು ಚಾಲಕ ಶ್ರೀಧರ್ಗೆ ನ್ಯಾಯಾಧೀಶೆ ಅನುಪಮ ಡಿ. ಆರು ತಿಂಗಳ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
2022ರಲ್ಲಿ ನಡೆದಿದ್ದ ಈ ಅಪಘಾತಕ್ಕೆ ಸಂಬಂಧಿಸಿದಂತೆ ಗುಬ್ಬಿ ಪೊಲೀಸರು ಐಪಿಸಿ 304 (ಎ) ಮತ್ತು 279 ಕಲಂ ಅಡಿ ಪ್ರಕರಣ ದಾಖಲಿಸಿದ್ದರು.
ಸರ್ಕಾರದ ಪರ ವಕೀಲ ನಿರಂಜನ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.