ADVERTISEMENT

ಅಜಾಗರೂಕ ಚಾಲನೆ: ಅಪರಾಧಿಗೆ 6 ತಿಂಗಳು ಜೈಲು

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 4:25 IST
Last Updated 18 ಜೂನ್ 2025, 4:25 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಗುಬ್ಬಿ: ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಅವರ ಸಾವಿಗೆ ಕಾರಣರಾಗಿದ್ದ ಕಾರು ಚಾಲಕ ಶ್ರೀಧರ್‌ಗೆ ನ್ಯಾಯಾಧೀಶೆ ಅನುಪಮ ಡಿ. ಆರು ತಿಂಗಳ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

2022ರಲ್ಲಿ ನಡೆದಿದ್ದ ಈ ಅಪಘಾತಕ್ಕೆ ಸಂಬಂಧಿಸಿದಂತೆ ಗುಬ್ಬಿ ಪೊಲೀಸರು ಐಪಿಸಿ 304 (ಎ) ಮತ್ತು 279 ಕಲಂ ಅಡಿ ಪ್ರಕರಣ ದಾಖಲಿಸಿದ್ದರು.

ADVERTISEMENT

ಸರ್ಕಾರದ ಪರ ವಕೀಲ ನಿರಂಜನ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.