ADVERTISEMENT

ತುರುವೇಕೆರೆ: ಸಿದ್ಧಗಂಗಾ ಸ್ವಾಮೀಜಿ ಸೇವೆ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2023, 6:16 IST
Last Updated 2 ಏಪ್ರಿಲ್ 2023, 6:16 IST
ತುರುವೇಕೆರೆ ತಾಲ್ಲೂಕಿನ ಮಾದಪಟ್ಟಣ ಗೇಟ್ ಸಮೀಪ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು
ತುರುವೇಕೆರೆ ತಾಲ್ಲೂಕಿನ ಮಾದಪಟ್ಟಣ ಗೇಟ್ ಸಮೀಪ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು   

ತುರುವೇಕೆರೆ: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 116ನೇ ಜನ್ಮ ದಿನೋತ್ಸವನ್ನು ತಾಲ್ಲೂಕಿನ ಹಲವೆಡೆ ವಿಶೇಷ ಕಾರ್ಯಕ್ರಮಗಳೊಂದಿಗೆ ಭಕ್ತರು ಶನಿವಾರ ಆಚರಿಸಿದರು.

ಮಾದಪಟ್ಟಣ ಗೇಟ್ ಸಮೀಪ ಗ್ರಾಮಸ್ಥರು, ಯುವಕರು ಹಾಗೂ ಭಕ್ತ ಮಂಡಳಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ವಾಮೀಜಿಯ ಬೃಹತ್ ಭಾವಚಿತ್ರವಿಟ್ಟು ವಿಶೇಷ ಪುಷ್ಪಾಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ಮಹಿಳೆಯರು ಸೇರಿದಂತೆ ನೆರೆದಿದ್ದ ಭಕ್ತರು ಭಾವಚಿತ್ರಕ್ಕೆ ಫಲಪುಷ್ಪ ಇಟ್ಟು ಪೂಜೆ ಸಲ್ಲಿಸಿದರು. ಭಜನಾ ಮಂಡಳಿ ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿ ಕೊಟ್ಟರು. ಪಾನಕ, ಮಜ್ಜಿಗೆ, ಮೊಸರನ್ನ, ಜಿಲೇಬಿ, ಪಲಾವು, ಪಾಯಸ ವಿತರಿಸ ಲಾಯಿತು.

ADVERTISEMENT

ನಿವೃತ್ತ ಶಿಕ್ಷಕ ನಿಜಗುಣಯ್ಯ ಮಾತನಾಡಿ, ಸಿದ್ಧಗಂಗಾ ಶ್ರೀ ಸಾವಿರಾರು ಮಕ್ಕಳಿಗೆ ಅನ್ನ, ಅಕ್ಷರ, ಜ್ಞಾನ ನೀಡುವ ಮೂಲಕ ತ್ರಿವಿಧ ದಾಸೋಹಿಯಾಗಿದ್ದರು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.