ADVERTISEMENT

‘ಜೆಡಿಎಸ್‌ ಏಜೆಂಟರಂತೆ ದೊರೆಸ್ವಾಮಿ ಕೆಲಸ’: ಎಂ.ಪಿ. ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 11:24 IST
Last Updated 29 ಫೆಬ್ರುವರಿ 2020, 11:24 IST
ಎಂ.ಪಿ.ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ   

ತುಮಕೂರು: ‘ಎಚ್‌.ಎಸ್.ದೊರೆಸ್ವಾಮಿ ಪಕ್ಷಾತೀತವಾಗಿ ಹೋರಾಟ ಮಾಡುತ್ತ ಸರ್ಕಾರಕ್ಕೆ ಸಲಹೆ ನೀಡಬೇಕು. ಅದು ಬಿಟ್ಟು ದೇಶದ್ರೋಹಿಗಳಿಗೆ ಬೆಂಬಲ ನೀಡುವುದು ತಪ್ಪು’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟಗಾರ ಎನ್ನುವ ನೆಪದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಇದ್ದಾರೆ. ಜೆಡಿಎಸ್‌ ಏಜೆಂಟರ ರೀತಿ ಕೆಲಸ ಮಾಡುತ್ತಾರೆ. ಅವರು ಪಕ್ಷಾತೀತವಾಗಿ ಸರ್ಕಾರಕ್ಕೆ ಸಲಹೆ ಕೊಟ್ಟರೆ ಸ್ವೀಕರಿಸುತ್ತೇವೆ’ ಎಂದರು.

ಕರ್ನಾಟಕ ಸೇರಿದಂತೆ ದೇಶದ ಹಲವು ಕಡೆ ದೇಶದ್ರೋಹಿ ಘೋಷಣೆಗಳು ಹೆಚ್ಚಿವೆ. ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ದೊರೆಸ್ವಾಮಿ ಏಕೆ ಖಂಡಿಸುವುದಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.