ADVERTISEMENT

ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹ

ಎಡೆಯೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2022, 3:58 IST
Last Updated 6 ಜನವರಿ 2022, 3:58 IST
ಕುಣಿಗಲ್ ತಾಲ್ಲೂಕು ದೊಡ್ಡಮಧುರೈ ಗ್ರಾಮಸ್ಥರು ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಿಸುವಂತೆ ಆಗ್ರಹಿಸಿ ಎಡೆಯೂರು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕುಣಿಗಲ್ ತಾಲ್ಲೂಕು ದೊಡ್ಡಮಧುರೈ ಗ್ರಾಮಸ್ಥರು ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಿಸುವಂತೆ ಆಗ್ರಹಿಸಿ ಎಡೆಯೂರು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕುಣಿಗಲ್: ತಾಲ್ಲೂಕಿನ ದೊಡ್ಡಮಧುರೈ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಗ್ರಾಮಸ್ಥರು ಬುಧವಾರ ಎಡೆಯೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದ ಮುಖಂಡರಾದ ಡಿ.ಜಿ.ಕೃಷ್ಣಪ್ಪ ನೇತೃತ್ವದಲ್ಲಿ ಬಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಮುಖಂಡ ಅಲೋಕ, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗುತ್ತಿರುವ ಜಾಗ ಸೂಕ್ತವಾಗಿಲ್ಲ. ಈ ಭಾಗದಲ್ಲಿ ಹೇಮಾವತಿ ನಾಲೆ, ಶಾಲೆ, ಶಿರಾ- ನಂಜನಗೂಡು ರಸ್ತೆ, ಜಾನುವಾರು ಬಳಕೆಯ ಕಟ್ಟೆ, ವಾಸದ ಮನೆ, ರೇಷ್ಮೆ ಇಲಾಖೆ ಇದೆ. ಈಗಾಗಲೇ ಹಲವರು ಮನವಿ ನೀಡಿದ್ದರೂ, ಪ್ರಯೋಜನವಾಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಸದಸ್ಯೆ ಚೂಡಾಮಣಿ ವೆಂಕಟೇಶ್, ಲಕ್ಷ್ಮಣ, ಗ್ರಾಮಸ್ಥರಾದ ಗಿರೀಶ್, ರಾಜಣ್ಣ, ಪ್ರಕಾಶ್, ಚನ್ನೇಗೌಡ, ನಾಗಣ್ಣ, ಶಂಕರ್, ಮಾಯಣ್ಣ ಇದ್ದರು.

ಅಧ್ಯಕ್ಷ ಕೃಷ್ಣಮೂರ್ತಿ ಮತ್ತು ಪಿಡಿಒ ಹರೀಂದ್ರ ಗೋಪಾಲ್ ಅವರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.