ADVERTISEMENT

ತಿಪಟೂರು: ಹಾಲ್ಕುರಿಕೆ ಕೆರೆಗೆ ನೀರು ಹರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 5:02 IST
Last Updated 5 ಅಕ್ಟೋಬರ್ 2021, 5:02 IST
ಹಾಲ್ಕುರಿಕೆ ಗ್ರಾಮದ ಗ್ರಾಮ ಪಂಚಾಯಿತಿ ಮುಂಭಾಗ ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಾಂತಕುಮಾರ್. ಮಾಗೇನಹಳ್ಳಿ ಶಂಕರ್, ರಮೇಶ್, ಕೊಡಗೀಹಳ್ಳಿ ಬಸವರಾಜು, ಚೇತನ್, ಉಮೇಶ್ ಗೌಡ, ಸಂಪತ್ತು, ರಾಜು, ದಿನೇಶ್ ಬಾಬು, ಗೊರಗೊಂಡನಹಳ್ಳಿ ಸುದರ್ಶನ್, ಮೋಹನ್ ಬಾಬು ಇದ್ದರು
ಹಾಲ್ಕುರಿಕೆ ಗ್ರಾಮದ ಗ್ರಾಮ ಪಂಚಾಯಿತಿ ಮುಂಭಾಗ ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಾಂತಕುಮಾರ್. ಮಾಗೇನಹಳ್ಳಿ ಶಂಕರ್, ರಮೇಶ್, ಕೊಡಗೀಹಳ್ಳಿ ಬಸವರಾಜು, ಚೇತನ್, ಉಮೇಶ್ ಗೌಡ, ಸಂಪತ್ತು, ರಾಜು, ದಿನೇಶ್ ಬಾಬು, ಗೊರಗೊಂಡನಹಳ್ಳಿ ಸುದರ್ಶನ್, ಮೋಹನ್ ಬಾಬು ಇದ್ದರು   

ತಿಪಟೂರು: ಕಳೆದ ಹಲವಾರು ವರ್ಷಗಳಿಂದ ಹಾಲ್ಕುರಿಕೆ ಭಾಗದ ರೈತರು ಕೆರೆಯಲ್ಲಿ ನೀರು ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದು, ಶಾಸಕರು ನೀಡಿದ ಭರವಸೆಯಂತೆ ನೀರು ಹರಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಮುಂಭಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಾಂತಕುಮಾರ್ ನೇತೃತ್ವದಲ್ಲಿ ಗ್ರಾಮಸ್ಥರು ಪಾದಯಾತ್ರೆ ನಡೆಸಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು.

ಶಾಂತಕುಮಾರ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಹಾಲ್ಕುರಿಕೆ ಕೆರೆಗೆ ನೀರು ಹರಿಸುವ ಭರವಸೆ ನೀಡುತ್ತಾ ಬಂದಿದ್ದು ಇಲ್ಲಿಯವರೆವಿಗೂ ಈಡೇರಿಸುವ ಕೆಲಸವಾಗಿಲ್ಲ. ಇಲ್ಲಿನ ಜನರು ಕೇವಲ ಮಳೆ ನೀರನ್ನೇ ಆಶ್ರಯಿಸಿದ್ದು ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದರು.

ADVERTISEMENT

ಮುಖಂಡ ಮಾಗೇನಹಳ್ಳಿ ಶಂಕರ್ ಮಾತನಾಡಿದರು.

ಮುಖಂಡರಾದ ರಮೇಶ್, ಕೊಡಗೀಹಳ್ಳಿ ಬಸವರಾಜು, ಚೇತನ್, ಉಮೇಶ್ ಗೌಡ, ಸಂಪತ್ತು, ರಾಜು, ದಿನೇಶ್ ಬಾಬು, ಗೊರಗೊಂಡನಹಳ್ಳಿ ಸುದರ್ಶನ್, ಮೋಹನ್ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.