ತುಮಕೂರು: ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಹೋಗಿ ದ್ವಿಚಕ್ರ ವಾಹನ ಸವಾರ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನ ಮುದ್ದಯ್ಯನಪಾಳ್ಯದ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ತಾಲ್ಲೂಕು ಸಿದ್ದಾಪುರ ಗ್ರಾಮದ ನಿವಾಸಿ ಜಗದೀಶ್ ( 38) ಮೃತಪಟ್ಟವರು. ಮಧುಗಿರಿಯಿಂದ ಮುದ್ದಯ್ಯನಪಾಳ್ಯ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.