ADVERTISEMENT

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 10 ಜನವರಿ 2023, 5:20 IST
Last Updated 10 ಜನವರಿ 2023, 5:20 IST
   

ತಿಪಟೂರು: ನಗರ ಹೊರವಲಯದ ಬಂಡಿಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ಎರಡು ಬೈಕ್ ಗಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಅಣ್ಣಾಮಲ್ಲೇನಹಳ್ಳಿ ಗ್ರಾಮದ ಲಿಂಗರಾಜು(35 ) ಸಾವನ್ನಪ್ಪಿದ್ದು, ಮತ್ತೊಂದು ಬೈಕ್ ನ ಸವಾರ ಅಣ್ಣಾಮಲ್ಲೇನಹಳ್ಳಿಯ ಗಂಗಾಧರ್(41) ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ತಿಪಟೂರು ನಗರ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT