ಶಿರಾ: ತಾಲ್ಲೂಕಿನ ಕೊಟ್ಟ ರಂಗಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಮನೆಯ ಹಿಂದಿನ ಬಾಗಿಲಿನ ಬೀಗ ಒಡೆದ ಕಳ್ಳರು ಸುಮಾರು ₹ 2.20 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಕೊಟ್ಟ ರಂಗಾಪುರ ಗ್ರಾಮದ ರಂಗಪ್ಪ ಅವರು ತಮ್ಮ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. ಮಂಗಳವಾರ ರಾತ್ರಿ ಶೆಕೆಯಿಂದಾಗಿ ಮನೆಗೆ ಬೀಗ ಹಾಕಿ ಹೊರಗೆ ಮಲಗಿದ್ದ ಸಮಯದಲ್ಲಿ ಕಳ್ಳತನ ನಡೆದಿದೆ. ಚಿನ್ನದ ಸರ, ನಕ್ಲೇಸ್, ದೊಡ್ಡವರ 3 ಹಾಗೂ ಮಕ್ಕಳ 4 ಉಂಗುರ, ಕಿವಿ ಓಲೆ ಹಾಗೂ ₹ 60 ಸಾವಿರ ನಗದು ಕಳ್ಳತನವಾಗಿದೆ.
ಸ್ಥಳಕ್ಕೆ ಶಿರಾ ನಗರ ಠಾಣೆಯ ಸಿಪಿಐ ನಿರ್ಮಲ, ಪಿಎಸ್ಐ ಭಾರತಿ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.