ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ನಿಗದಿ ಆಗಿರುವ ಹೇಮಾವತಿ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಒತ್ತಾಯಿಸುವೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.
ತಾಲ್ಲೂಕಿನ ನಾಗವಲ್ಲಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ವರ್ಷ ಗ್ರಾಮಾಂತರ ಕ್ಷೇತ್ರಕ್ಕೆ ಹಂಚಿಕೆ ಆಗಿರುವ ಹೇಮಾವತಿ ನೀರು ಹರಿಸಲಿಲ್ಲ. ಈ ಬಾರಿ ಉತ್ತಮ ಮಳೆಯಾಗಿದೆ. ಹೇಮಾವತಿ ಜಲಾಶಯ ತುಂಬುವ ಹಂತದಲ್ಲಿ ಇದೆ. ಆದ್ದರಿಂದ ಈ ಬಾರಿ ಎಲ್ಲ ಕೆರೆಗಳನ್ನು ತುಂಬಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ನಾಗವಲ್ಲಿ ಮತ್ತು ಹೊನ್ನುಡಿಕೆ ಕೆರೆಗಳಿಗೆ ನೀರು ಹರಿಸುವ ಮೂಲಕ ಇಷ್ಟು ವರ್ಷಗಳ ಕಾಲ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಸೋಮವಾರ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಒತ್ತಾಯಿಸುವೆ ಎಂದರು.
ನಾಗವಲ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಸೇರುತ್ತಿರುವುದು ಸಂತಸದ ವಿಚಾರ. ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕಾರ್ಯಕರ್ತರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.
ಜೆಡಿಎಸ್ ಮುಖಂಡ ಹಾಲನೂರು ಅನಂತಕುಮಾರ್, ತಾ.ಪಂ ಸದಸ್ಯ ದೀಪು, ರಾಮಣ್ಣ, ರಾಜು, ಗ್ರಾ.ಪಂ ಸದಸ್ಯ ವಿಜಯ್, ಸುರೇಶ್, ಸ್ವಾಮಿ, ಕೃಷ್ಣಪ್ಪ ಉಪಸ್ಥಿತರಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.